ನಾನು ಮರಳಿ ಬರಬೇಕೆಂದು ಬಯಸಿರಲಿಲ್ಲ
ರೆಕ್ಕೆ ಇತ್ತು ತಾನೆ ಆಕಾಶದೆತ್ತರಕೆ ಹಾರಲು
ಹದಿಎನೋ ಮುಳ್ಳಿನದೇ
ಕನಸು ಇತ್ತು ಹೆಣೆಯುತ್ತ ಸಾಗಲು
ಆದರೆ ಅದೇನಾಯಿತೋ ರೆಕ್ಕೆ ಬಡಿಯುವ ಶಕ್ತಿಯೇ ಇಲ್ಲವಾಗಿದೆ
ಕೊನೆಯಿಲ್ಲದ ಹಾದಿಯಲ್ಲಿ ಸಾಗಿ ...
**********
ಒಂದಲ್ಲ ಎರಡಲ್ಲ ಸಾವಿರ ಸಾವಿರ ಜನ
ಬಿಸಿಲ ಕುದುರೆಯೇರಿದ ಅವರಿಗೆ ಬೇರೆಲ್ಲ ಗೌಣ
ಬೆರಗಾಗಿದ್ದೆ ನಾ ಒಂದರೆಕ್ಷಣ
ಅಬ್ಬಬ್ಬ ... ಅದೇನು ಛಲ
ಎದುರು ಸಿಕ್ಕ ಬಂಡೆಯ ಅರೆಕ್ಷಣದಿ ಪುದಿಮಾದಬಲ್ಲ ಬಲ
************
ಹಾರುತ್ತ ನಲಿಯುತ್ತ ಮುಂದೆ ಹೋದಂತೆಲ್ಲ
ಇದೇನಾ... ಆ ಮುಖ ಇದೇನಾ ಆ ಗುರಿಯೇದೆಗಿನ ಸುಖ
ನೋವಿಲ್ಲ ನಲಿವಿಲ್ಲ ಆ ಮೊದಲ ಹುಮ್ಮಸ್ಸು ಅಲ್ಲಿಲ್ಲ
ಬಾಡಿ ಹೋದ ಮುಖ ಸೋತು ಸೊರಗಿದ ದೇಹ
ಗುರಿ ಮುಟ್ಟುವ ತವಕವೇ ಅಲ್ಲುಳಿದಿಲ್ಲ
ಏನಾಯಿತೋ , ಹೇಗಾಯಿತೋ ...
***********
ಬೆಳಕು ಹರಿದಾಗ ನಾ ನಾ ನಾನಾಗಿರಲಿಲ್ಲ
ಇನ್ನಸ್ಟು ಸುಳ್ಳು ನನಗೆ ಬೇಕಿರಲಿಲ್ಲ
ನನ್ನೊಳಗಿನ ಕಪಟ ನನ್ನರಿವಿಗೆ ಬರಲಿಲ್ಲ
ಎಲ್ಲಿ ಹೋಗಲಿ ಯಾರ ಕೇಳಲಿ
*************
ಚೂರಾಗಿದೆ ಮನಸು
ನಾ ಪೋಣಿಸಿದ ಕನಸು
ಹರಡಿ ಬಿದ್ದಿದೆ ಹಾದಿಯಲಿ
ಆ ನನಸಾಗದ ಕನಸು ...
-- ಬೆಟ್ಟದ ಜೀವ(ಇದು ನನ್ನ ಮೊದಲ ಪ್ರಕಟಿತ ಕವನ.)
2 comments:
Really, you are making a very nice blog.Cingrates.Your peoms are also good. Keep writing.
ಹಾಯ್ ಅಜಿತ್,
'ಬೆಟ್ಟದ ಜೀವ' ಚೆನ್ನಾಗಿದೆ. ನಿಮ್ಮ ಭಾವಚಿತ್ರ ಬದಲಿಸಲು ಯತ್ನಿಸಿ. ಅಂದದ ಅಕ್ಷರ ಬಳಸಿ. ಶುಭವಾಗಲಿ.
- ಗೊದ್ಲಬೀಳು ಪರಮೇಶ್ವರ
Post a Comment